ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಚೆನ್ನೈ: ದಕ್ಷಿಣ ಭಾರತದ ಭಾಷೆಗಳ ಚಿತ್ರಗಳಲ್ಲಿ ಖಳನಾಯಕನಾಗಿ ನಟಿಸುತ್ತಿದ್ದ ಡೇನಿಯಲ್ ಬಾಲಾಜಿ ಹೃದಯಾಘಾತದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ ರಾತ್ರಿ ಎದೆನೋವು ಕಾಣಿಸಿಕೊಂಡಿದೆ. ಚೆನ್ನೈನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದ್ರೆ, ಅಷ್ಟರಲ್ಲಿಯೇ ನಿಧನ ಹೊಂದಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.
ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡದ ಚಿತ್ರಗಳಲ್ಲಿ ನಟಿಸಿದ್ದಾರೆ. ತಮಿಳು ಧಾರವಾಹಿಯ ಮೂಲಕ ಚಿತ್ರರಂಗದಲ್ಲಿ ಕಾಣಿಸಿಕೊಂಡರು. ತಮಿಳು, ತೆಲುಗಿನ ಸ್ಟಾರ್ ನಟರ ಎದುರು ವಿಲನ್ ಆಗಿ ಕಾಣಿಸಿಕೊಂಡರು. ಕನ್ನಡದಲ್ಲಿ ಯಶ್ ನಟನೆಯ ಕಿರಾತಕ ಚಿತ್ರದಲ್ಲಿಯೂ ನಟಿಸಿದ್ದಾರೆ. ಇವರ ನಿಧನಕ್ಕೆ ಚಿತ್ರರಂಗದ ಮಂದಿ ಸಂತಾಪ ಸೂಚಿಸಿದ್ದಾರೆ.