ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್, ಮಾಧ್ಯಮದ ಹಿರಿಯರ ಬಳಿ ಕ್ಷಮೆ ಕೇಳಿದ್ದಾರೆ. ಹೌದು, ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡುರುವ ನಟ ದರ್ಶನ್, ಕಳೆದ ಎರಡು ವರ್ಷಗಳ ಹಿಂದೆ ನಡೆದಿದ್ದ ಕಹಿ ಘಟನೆಯನ್ನು ಮೆಲುಕು ಹಾಕಿದ್ದಾರೆ.
ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ನೇತೃತ್ವದಲ್ಲಿ ನಟ ದರ್ಶನ್ ಹಾಗೂ ಎಡಿಟರ್ಸ್ ಗಿಲ್ಡ್ ಆಫ್ ಬೆಂಗಳೂರು ಅವರೊಂದಿಗೆ ಮಾತುಕತೆ ನಡೆದಿದೆ. ಅದು ಸುಖಾಂತ್ಯ ಕಂಡಿದ್ದು, ಕೆಲ ವರ್ಷಗಳ ಹಿಂದೆ ವಿಷಮ ಗಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ಪ್ರತಿಕ್ರಿಯೆ ನೀಡಿದ್ದೆ. ಆದರೂ, ಅಂತಹ ಮಾತಿನಿಂದ ನೋವಾಗಿದ್ದರೆ ಮಾಧ್ಯಮದ ಹಿರಿಯರಲ್ಲಿ ಕ್ಷಮೆ ಕೋರುವುದು ತಪ್ಪಿಲ್ಲ ಎಂದಿದ್ದಾರೆ.