ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಕಾಟೇರ ಸಿನಿಮಾ ಬಿಗ್ ಸಕ್ಸಸ್ ಕಂಡಿದೆ. ಬಹುಶಃ ಕಾಟೇರ ಚಿತ್ರ ತಂಡ ಸಹ ನಿರೀಕ್ಷೆ ಮಾಡಿರದಷ್ಟು ಯಶಸ್ವಿಯಾಗಿ ಸಿನಿಮಾ ಓಡುತ್ತಿದೆ. ನಟ ದರ್ಶನ್ ದುಬೈ ಪ್ರವಾಸದಲ್ಲಿದ್ದು, ಅಲ್ಲಿಯೂ ಸಹ ತಮ್ಮ ಚಿತ್ರಕ್ಕೆ ಅಭಿಮಾನಿಗಳು ತೋರಿಸಿದ ಪ್ರೀತಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಆದರೆ, ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿನ ಬರಹ ಯಾಕೆ ಎನ್ನುವ ಪ್ರಶ್ನೆ ಮೂಡಿದೆ.
ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದಕೊಳಲ್ಲ. ಕಾಲಾಯ ತಸ್ಮಯ್ ನಮಃ ಎಂದಿದ್ದಾರೆ.
ಕೆಲ ದಿನಗಳ ಹಿಂದೆ ಬೆಂಗಳೂರಿನ ಪಬ್ ವೊಂದರಲ್ಲಿ ನಿಯಮ ಉಲ್ಲಂಘಿಸಿ ಮುಂಜಾನೆ ತನಕ ಪಾರ್ಟಿ ಮಾಡಿದ್ದಾರೆ ಎಂದು ದರ್ಶನ್ ಸೇರಿ ಸಿನಿ ರಂಗದ 8 ಮಂದಿಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಿಂದ ನೋಟಿಸ್ ನೀಡಲಾಗಿತ್ತು. ಈಗ ನಟ ದರ್ಶನ್ ಮಾಡಿರುವ ಪೋಸ್ಟ್ ಗೂ ಇದಕ್ಕೂ ಸಂಬಂಧವಿದೆಯಾ ಎನ್ನುವ ಪ್ರಶ್ನೆ ಮೂಡಿದೆ.