ಪ್ರಜಾಸ್ತ್ರ ಸುದ್ದಿ
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಹತ್ತಿರದ ದೆಕ್ಕಾಡುವಿನ ಕೊರಗಜ್ಜ ಆದಿಸ್ಥಳಕ್ಕೆ ಭಾನುವಾರ ನಟ ದರ್ಶನ್ ಭೇಟಿ ಕೊಟ್ಟರು. ಹಾಸ್ಯ ನಟ ಚಿಕಣ್ಣ ಸೇರಿದಂತೆ ಅವರ ಸ್ನೇಹ ಬಳಗದೊಂದಿಗೆ ಬಂದು ತಮ್ಮ ಇಷ್ಟಾರ್ಥಗಳನ್ನು ಬೇಡಿಕೊಂಡರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಮಲತಾ ಅವರಿಗೆ ನೀವು ಬೆಂಬಲ ನೀಡ್ತೀರಾ ಎಂದು ಕೇಳಿದ್ದಕ್ಕೆ ಹೆತ್ತ ತಾಯಿಯನ್ನು ಎಂದಾದರೂ ಬಿಟ್ಟು ಕೊಡಲಿಕ್ಕಾಗುತ್ತದೆಯೇ? ಮೊನ್ನೆಯವರೆಗೂ ಸುಮಲತಾ ಅಮ್ಮನ ಜೊತೆ ಇದ್ದೆ. ಈಗ ಅವರ ಕೈ ಬಿಟ್ಟರೆ ಆಗುತ್ತದೆಯೇ ಎಂದು ಹೇಳುವ ಮೂಲಕ ಸದಾ ಅವರೊಂದಿಗೆ ಇರುತ್ತೇವೆ ಎಂದಿದ್ದಾರೆ.