ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಹೊಸಪೇಟೆಯಲ್ಲಿ ನಟ ದರ್ಶನ್ ಅವರ ಕ್ರಾಂತಿ ಚಿತ್ರದ ಹಾಡು ಬಿಡುಗಡೆ ವೇಳೆ ಯಾರೋ ಕಿಡಿಗೇಡಿಗಳು ಚಪ್ಪಲಿ ಎಸೆದ ಘಟನೆ ನಡೆಯಿತು. ಈ ಸಂಬಂಧ ಈಗಾಗ್ಲೇ ಮೂವರನ್ನು ಬಂಧಿಸಲಾಗಿದೆ. ಇನ್ನು ಕೆಲವರ ಪತ್ತೆ ಕಾರ್ಯ ನಡೆದಿದೆ. ಇದರ ನಡುವೆ ರಾಜಕುಮಾರ್ ಅಭಿಮಾನಿಗಳ ಸಂಘ, ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘ ಸೇರಿದಂತೆ ಕನ್ನಡ ಪರ ಸಂಘಟನೆಗಳಿಂದ ಫಿಲ್ಮ್ ಚೇಂಬರ್ ಗೆ ದೂರು ನೀಡಲು ಸಜ್ಜಾಗಿದ್ದಾರೆ.
ವಿನಾಃ ಕಾರಣ ಪುನೀತ್ ಹಾಗೂ ರಾಜಕುಮಾರ್ ಕುಟುಂಬಸ್ಥರ ವಿರುದ್ಧ ದರ್ಶನ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟ ಕೆಟ್ಟದಾಗಿ ಕಾಮೆಂಟ್ಸ್ ಮಾಡುತ್ತಿದ್ದಾರೆ. ಯಾರೋ ಮಾಡಿದ ತಪ್ಪಿಗೆ ಪುನೀತ್ ಅವರ ಅಭಿಮಾನಿಗಳ ಮೇಲೆ ಗೂಬೆ ಕೂರಿಸುವ ಕೆಲಸ ನಡೆದಿದೆ. ತುಂಬಾ ಕೀಳು ಮಟ್ಟದ ಪದಗಳನ್ನು ಬಳಿಸಿ ಕಾಮೆಂಟ್ಸ್ ಮಾಡಲಾಗುತ್ತಿದ್ದು, ನಟ ದರ್ಶನ್ ಅವರನ್ನು ಕರೆದು ಎಚ್ಚರಿಕೆ ನೀಡಬೇಕು ಎಂದು ಫಿಲ್ಮ್ ಚೇಂಬರ್ ಗೆ ಡಿಸೆಂಬರ್ 29ರಂದು ನೀಡಲು ಸಜ್ಜಾಗಿದ್ದಾರೆ.
ಇದರ ಜೊತೆಗೆ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳಿಂದ ಬೃಹತ್ ಬಹಿರಂಗ ಸಭೆ ನಡೆಸಲಾಗುವುದು ಎಂದು ತಿಳಿಸಲಾಗಿದೆ. ಈ ಮೂಲಕ ಸ್ಟಾರ್ ವಾರ್ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ರೀತಿಯ ಹೋರಾಟ ಶುರುವಾಗಿದೆ. ನಾಳೆ ಏನಾಗಲಿದೆ ಅನ್ನೋ ಕುತೂಹಲ ಎಲ್ಲರಲ್ಲಿ ಮೂಡಿದೆ.