ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಸ್ಯಾಂಡಲ್ ವುಡ್ ಸಾಹಸಸಿಂಹ ವಿಷ್ಣುವರ್ಧನ್ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಸಂಭ್ರಮ ಆಚರಣೆ ಮಾಡುತ್ತಿದ್ದಾರೆ. ಹೀಗಾಗಿ ನಟ ಕಿಚ್ಚ ಸುದೀಪ್ ಅವರು ಕಾಮನ್ ಡಿಪಿ ಬಿಡುಗಡೆ ಮಾಡಿದ್ದಾರೆ.
ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ವಿಷ್ಣುವರ್ಧನ್ ಅವರ ಸಿಡಿಪಿ ಬಿಡುಗಡೆ ಮಾಡಲಾಗಿದೆ. ಹ್ಯಾಪಿ ಬರ್ತಡೆ ಯಜಮಾನ್ರೆ ಎಂದು ಬರೆಯಲಾಗಿದೆ. ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಿಸಲಾಗಿದ್ದು, ಇದೆ ಮೊದಲ ಬಾರಿಗೆ ಅಲ್ಲಿ ಅದ್ಧೂರಿಗೆ ಹುಟ್ಟು ಹಬ್ಬದ ಸಿದ್ಧತೆ ನಡೆದಿದೆ.
ಡಿಸೆಂಬರ್ 30, 2009ರಲ್ಲಿ ವಿಷ್ಣುವರ್ಧನ್ ಕೊನೆಯುಸಿರೆಳೆದರು. ಬೆಂಗಳೂರಿನ ಅಭಿನಯ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಅವರ ಅಂತ್ಯಸಂಸ್ಕಾರ ನಡೆಸಲಾಯಿತು. ಅಲ್ಲಿಯೇ ಸ್ಮಾರಕ ನಿರ್ಮಾಣಕ್ಕೆ ಸುದೀರ್ಘ ಹೋರಾಟ ನಡೆಸಲಾಯಿತು. ಕೊನೆಗೂ ಆಗದೆ ಮೈಸೂರಿನಲ್ಲಿ ನಿರ್ಮಾಣ ಮಾಡಲಾಯಿತು.