ಪ್ರಜಾಸ್ತ್ರ ಸಿನಿಮಾ ಡೆಸ್ಕ್
ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಸೋಷಿಯಲ್ ಮೀಡಿಯಾದಲ್ಲಿ ಸದಾ ಇರುತ್ತಾರೆ. ಪ್ರತಿಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ಅಭಿಮಾನಿಗಳಿಗೆ, ಬೆಂಬಲಿಗರಿಗೆ ಮಾಹಿತಿ ನೀಡುತ್ತಿರುತ್ತಾರೆ.
ಇತ್ತೀಚೆಗೆ ಅವರ ಪಾದದ ಮೂಳೆ ಮುರಿತದ ಕುರಿತು ಟ್ವೀಟ್ ಮಾಡಿದ್ದಾರೆ. ಅದರಲ್ಲಿ 6 ವಾರದ ದಿಘ್ಬಂಧನ ಎಂದು ಬರೆದಿದ್ದರು. ಇದರಲ್ಲಿರುವ ತಪ್ಪನ್ನು ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಹೇಳಿದ್ದಾರೆ. ದಿಘ್ಬಂಧನ ಅಲ್ಲ. ದಿಗ್ಬಂಧನ. ಅನಗತ್ಯವಾಗಿ ಮಹಾಪ್ರಾಣ ಪ್ರಯೋಗಿಸಬೇಡಿ ಅಂತಾ ಹೇಳಿದ್ದಾರೆ. ಇದಕ್ಕೆ ಹಲವು ರೀತಿಯಲ್ಲಿ ಪ್ರತಿಕ್ರಿಯೆಗಳು ಬಂದಿವೆ.