ಪ್ರಜಾಸ್ತ್ರ ಸುದ್ದಿ
ಚಿಕ್ಕಬಳ್ಳಾಪುರ: ನವರಸ ನಾಯಕ ಜಗ್ಗೇಶ ಅವರ ಪುತ್ರ ಗುರುರಾಜ ಅವರ ಕಾರು ಅಪಘಾತವಾಗಿದೆ. ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಹೈದ್ರಾಬಾದ್ ನಿಂದ ಬೆಂಗಳೂರಿಗೆ ಬರುವಾಗ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಣಾಪಾಯವಾಗಿಲ್ಲ. ಗುರುರಾಜಗೆ ಸಣ್ಣಪುಟ್ಟ ಗಾಯಗಳಾಗಿವೆ.
ಬೆಂಗಳೂರು-ಹೈದ್ರಾಬಾದ್ ರಸ್ತೆಯ ಅಗಲಗುರ್ಕಿ ಹತ್ತಿರ ಕಾರು ಅಪಘಾತವಾಗಿದೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಗೆ ಇದು ಬರಲಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.