ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಮಂಡ್ಯ: ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿದ್ದಾರೆ ಅನ್ನೋ ಪ್ರಕರಣದ ಹಿನ್ನೆಲೆಯಲ್ಲಿ ಹಿರಿಯ ನಟ ಜೈಜಗದೀಶ್, ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಪೊಲೀಸರು ಎದುರು ವಿಚಾರಣೆಗೆ ಹಾಜರಾಗಿ ಘಟನೆ ಕುರಿತು ಮಾಹಿತಿ ನೀಡಿದ್ದಾರೆ.
ಕಳೆದ ಜೂನ್ 5ರಂದು ಬೆಳ್ಳೂರು ಕ್ರಾಸ್ ಟೋಲ್ ಹತ್ತಿರ ಕಾರಿನ ಮೇಲೆ ಬಸ್ ನಲ್ಲಿದ್ದ ವ್ಯಕ್ತಿ ಬಾಟಲ್ ಎಸೆದಿದ್ದಾರೆ ಎಂದು ಹೇಳಲಾಗಿದೆ. ಇದೇ ವಿಚಾರಕ್ಕೆ ಬಸ್ ನಿಂದ ವ್ಯಕ್ತಿ ಇಳಿದು ಹೋಗವಾಗ ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ವ್ಯಕ್ತಿ ನೀಡಿದ ದೂರಿನ ಮೇರೆಗೆ ಜೈಜಗದೀಶ್ ಅವರು ಠಾಣೆಗೆ ಹಾಜರಾದರು.