ಪ್ರಜಾಸ್ತ್ರ ಸಿನಿಮಾ ಡೆಸ್ಕ್
ತಮಿಳು ನಟ ವಿಶಾಲ್ ತೆಗೆದುಕೊಂಡಿರುವ ನಿರ್ಧಾರಕ್ಕೆ ಕನ್ನಡಿಗರೆಲ್ಲ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅದೇನು ಅಂದರೆ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದಿಂದ ಇಡೀ ರಾಜ್ಯ ಶೋಕಸಾಗರದಲ್ಲಿದೆ. ಇಂತಹ ಸಂದರ್ಭದಲ್ಲಿ ಅವರ ಕುಟುಂಬದ ಬೆನ್ನಿಗೆ ನಿಲ್ಲುವುದರ ಜೊತೆಗೆ ಅವರ ಜನಪರ ಸೇವೆಯನ್ನು ಮುಂದುವರೆಸಿಕೊಂಡು ಹೋಗುವುದಾಗಿ ಹೇಳಿದ್ದಾರೆ.
ಹೌದು, ನಟ ಪುನೀತ್ 1,800 ಹೆಣ್ಮಕ್ಕಳ ವಿದ್ಯಾಭ್ಯಾಸ ಖರ್ಚನ್ನು ನೋಡಿಕೊಳ್ಳುತ್ತಿದ್ದರು. ಅದರ ಖರ್ಚು ಹಾಗೂ ಜವಾಬ್ದಾರಿ ಇನ್ನು ಮುಂದೆ ನನ್ನದು ಎಂದು ನಟ ವಿಶಾಲ್ ಹೇಳಿದ್ದಾರೆ. ಇವರ ಈ ನಡೆ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.