ಪ್ರಜಾಸ್ತ್ರ ಸುದ್ದಿ
ದಾವಣಗೆರೆ: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದಿಂದ ಕರ್ನಾಟಕ ಮಾತ್ರವಲ್ಲ ದೇಶದ ತುಂಬಾ ಕಣ್ಣೀರು ಹಾಕುತ್ತಿದ್ದಾರೆ. ಅಪ್ಪು ಕಳೆದುಕೊಂಡು 5 ದಿನಗಳು ಕಳೆದಿದ್ದು, ಅವರ ಅಭಿಮಾನಿಗಳ ಸಾವಿನ ಸರಣಿ ಮುಂದುವರೆದಿದೆ.
ದಾವಣಗೆರೆಯ ವಿಜಯನಗರ ಬಡಾವಣೆ ನಿವಾಸಿ ಸಿ.ಕುಮಾರ್(25) ಅನ್ನೋ ಯುವಕ ಅಪ್ಪು ನಿಧನದಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ. ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದ ಸಿ.ಕುಮಾರ್ ಖಿನ್ನತೆಗೆ ಒಳಗಾಗಿದ್ದ. ಇದರಿಂದ ಹೊರ ಬರಲಾಗದೆ ನೇಣಿಗೆ ಶರಣಾಗಿದ್ದಾನೆ.