ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

192

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಂದು ಸ್ಯಾಂಡಲ್ ವುಡ್ ಸೇರಿದಂತೆ ಇಡೀ ಭಾರತೀಯ ಚಿತ್ರರಂಗಕ್ಕೆ ಇಂದು ಬಹುದೊಡ್ಡ ಶಾಕ್ ಆಗಿದೆ. ನಟ ಪುನೀತ್ ರಾಜಕುಮಾರ್(46) ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮೂಲಕ ಪ್ರತಿಯೊಬ್ಬರಿಗೂ ಬಹುದೊಡ್ಡ ಶಾಕ್ ಆಗಿದೆ. ಪುನೀತ್ ಅಂತಿಮ ದರ್ಶನಕ್ಕೆ ನಗರದ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಬಹುಶಃ ನಾಳೆ ಅಂತಿಮ ವಿಧಿವಿಧಾನ ನಡೆಯುವ ಸಾಧ್ಯತೆಯಿದೆ.

ಮಾಜಿ ಪ್ರಧಾನಿ ದೇವೇಗೌಡ, ಸಿಂಎಂ ಬೊಮ್ಮಾಯಿ, ಮಾಜಿ ಸಿಎಂಗಳಾದ ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿದಂತೆ ರಾಜಕೀಯ ಗಣ್ಯರು, ಸಿನಿ ರಂಗದ ದಿಗ್ಗಜರು ಭಾವಪೂರ್ಣ ಸಂತಾಪ ಸೂಚಿಸಿದ್ದಾರೆ.

ಕನ್ನಡ ಚಿತ್ರರಂಗ ಮಾತ್ರವಲ್ಲದೆ ಸೌಥ್ ಸಿನಿ ರಂಗದ ದಿಗ್ಗಜರು, ಬಾಲಿವುಡ್ ನಟ, ನಟಿಯರು ಕಂಬನಿ ಮಿಡಿದಿದ್ದಾರೆ. ಇನ್ನು ತಂದೆಯಂತೆ ಪುನೀತ್ ಸಹ ಕಣ್ಣು ದಾನ ಮಾಡಿದ್ದಾರೆ. ಈ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.




Leave a Reply

Your email address will not be published. Required fields are marked *

error: Content is protected !!