ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ ಅಂತಿಮ ಸಂಸ್ಕಾರಕ್ಕೆ ವಿಧಿ ವಿಧಾನಗಳನ್ನ ಮಾಡಲಾಗುತ್ತಿದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಸರ್ಕಾರದಿಂದ ವ್ಯವಸ್ಥೆ ಮಾಡಲಾಗಿದೆ. 10.30ರ ನಂತರ ಅವರ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಂಚನಹಳ್ಳಿಗೆ ತೆಗೆದುಕೊಂಡು ಹೋಗಲಾಗುತ್ತೆ.
ಪಂಚನಹಳ್ಳಿಯಲ್ಲಿ ಒಂದು ಗಂಟೆಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದಾದ್ಮೇಲೆ ವಿಜಯ ಸ್ನೇಹಿತ ರಘು ಅವರ ತೋಟದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನಡೆಯಲಿದೆ.
ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಸರ್ಕಾರ ವ್ಯವಸ್ಥೆ ಮಾಡಿದ್ದು, ಸಿನಿ ರಂಗದ ದಿಗ್ಗಜರು, ಸ್ನೇಹಿತರು, ಅಪಾರ ಸಂಖ್ಯೆಯ ಅಭಿಮಾನಿಗಳು ಬಂದು ಅವರ ಅಂತಿಮ ದರ್ಶನ ಪಡೆದು, ಸಂತಾಪ ಸೂಚಿಸ್ತಿದ್ದಾರೆ.