ಪ್ರಜಾಸ್ತ್ರ ಸುದ್ದಿ
ಮಂಡ್ಯ: ದಿವಂಗತ ಡಾ.ಪುನೀತ್ ರಾಜಕುಮಾರ್ ಅವರಿಗೆ ಮಂಗಳವಾರ ಸಂಜೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಹೋದರ, ನಟ ಶಿವರಾಜಕುಮಾರ್ ಹಾಗೂ ಕುಟುಂಬಸ್ಥರು ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಶ್ರೀ ನಿಮಷಾಂಭ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ.
ದಿವಂಗತ ಡಾ.ರಾಜ್ ಕುಮಾರ್ ಕಾಲದಿಂದಲೂ ನಿಮಿಷಾಂಭದೇವಿಗೆ ನಡೆದುಕೊಂಡು ಬರಲಾಗುತ್ತಿದೆ. ಎರಡು ದಿನಗಳ ಹಿಂದೆ ಪುನೀತ್ ಪತ್ನಿ ಅಶ್ವಿನಿ ಅವರು ದೇವಸ್ಥಾನಕ್ಕೆ ಬಂದಿದ್ದರು. ಇಂದು ಶಿವಣ್ಣ ಕುಟುಂಬಸ್ಥರು ಬಂದಿದ್ದಾರೆ.