ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ ಅವರಿಗೆ ಗನ್ ಮ್ಯಾನ್ ಭದ್ರತೆ ನೀಡಲಾಗಿದೆ. ಇದರ ಜೊತೆಗೆ ಅವರ ಮನೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇದಕ್ಕೆ ಕಾರಣ, ನಟ ಶಿವರಾಜಕುಮಾರ ಅವರಿಗೆ ಜೀವ ಬೆದರಿಕೆ ಇದೆ ಎಂದು, ಮಾಜಿ ಸಚಿವೆ, ಲೇಖಕಿ ಬಿ.ಟಿ ಲಲಿತಾ ನಾಯಕ ಅವರ ಹೇಳಿಕೆಯಿಂದಾಗಿ.
ಕಾರ್ಯಕ್ರಮವೊಂದರಲ್ಲಿ ಮಾತ್ನಾಡಿದ ಅವರು, ನಟ ಶಿವರಾಜಕುಮಾರ, ಹಿರಿಯ ಪತ್ರಕರ್ತರೊಬ್ಬರು ಹಾಗೂ ತಮ್ಗೆ ಜೀವ ಬೆದರಿಕೆ ಇದೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಣ್ಣನಿಗೆ ಗನ್ ಮ್ಯಾನ್ ನೀಡಲಾಗಿದೆ. ಅವರ ಮನೆಗೆ ಎರಡು ಪಾಳೆಯದಲ್ಲಿ 4 ಜನ ಪೊಲೀಸರನ್ನ ನೇಮಿಸಲಾಗಿದೆ.