ನಟ ಚೇತನ್ ಅಹಿಂಸಾಗೆ ಜಾಮೀನು

189

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಿಂದು ಧರ್ಮದ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರನ್ನು ಮಾ.21ರಂದು ಬಂಧಿಸಲಾಗಿತ್ತು. ಇಂದು ಅವರಿಗೆ ಜಾಮೀನು ಸಿಕ್ಕಿದೆ.

ಬಂಧನದ ಬಳಿಕ 32ನೇ ಎಸಿಎಂಎಂ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. 25 ಸಾವಿರ ರೂಪಾಯಿ ಬಾಂಡ್, ಒಬ್ಬರ ಭದ್ರತೆಯನ್ನು ನೀಡಲು ಸೂಚಿಸಲಾಗಿದೆ.

ಶಿವಕುಮಾರ್ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಶೇಷಾದ್ರಿಪುರ ಠಾಣೆ ಪೊಲೀಸರು ಮಾರ್ಚ್ 21ರಂದು ಬಂಧಿಸಿದ್ದರು. ಐಪಿಸಿ 295ಎ, 505ಬಿ ಸಕ್ಷನ್ ಅಡಿ ಕೇಸ್ ದಾಖಲಿಸಿದ್ದರು. ಇದನ್ನು ಖಂಡಿಸಿ ಎಲ್ಲಡೆಯಿಂದ ತೀವ್ರ ಖಂಡನೆ ವ್ಯಕ್ತವಾಯಿತು. ಸರ್ಕಾರ, ಪೊಲೀಸ್ ಇಲಾಖೆಯ ನಡೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಖಂಡಿಸಲಾಯಿತು.




Leave a Reply

Your email address will not be published. Required fields are marked *

error: Content is protected !!