ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಸ್ಯಾಂಡಲ್ ವುಡ್ ರೋರಿಂಗ್ ಸ್ಟಾರ್ ಶ್ರೀಮುರುಳಿ ಇದೀಗ ಬಘೀರ್ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿ ಇದ್ದಾರೆ. ಸಿನಿಮಾ ಸೆಟ್ ವೇಳೆ ಮೊಣಕಾಲಿಗೆ ಗಾಯವಾಗಿದ್ದು, ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಮದಗಜ ಶೂಟಿಂಗ್ ವೇಳೆಯೇ ಮೊಣಕಾಲಿಗೆ ಗಾಯವಾಗಿತ್ತು. ಬಘೀರ್ ಶೂಟಿಂಗ್ ವೇಳೆಯೂ ಗಾಯವಾದ ಪರಿಣಾಮ ಶಸ್ತ್ರ ಚಿಕಿತ್ಸೆ ಮಾಡಬೇಕು ಎಂದು ಡಾಕ್ಟರ್ ಹೇಳಿದ್ದರಿಂದ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಹೀಗಾಗಿ 3 ತಿಂಗಳ ಕಾಲ ರೆಸ್ಟ್ ಮಾಡಲು ಹೇಳಿದ್ದಾರೆ.
ನಟ ಶ್ರೀಮುರುಳಿಗೆ ರೆಸ್ಟ್ ತೆಗೆದುಕೊಳ್ಳಲು ಹೇಳಿರುವುದರಿಂದ ಬಘೀರ್ ಚಿತ್ರದ ಶೂಟಿಂಗ್ ನಿಲ್ಲಿಸಲಾಗಿದೆ. ಡಾ.ಸೂರಿ ನಿರ್ದೇಶನ ಮಾಡುತ್ತಿದ್ದು, ಹೊಂಬಾಳೆ ಫಿಲ್ಮ್ ನಿರ್ಮಾಣ ಮಾಡುತ್ತಿದೆ. ಮೂರು ತಿಂಗಳು ಚಿತ್ರೀಕರಣ ನಿಲ್ಲಿಸಲಾಗುತ್ತಾ ಅಥವ ನಟ ಶ್ರೀಮುರುಳಿ ಭಾಗ ಬಿಟ್ಟು ಉಳಿದ ಭಾಗದ ಶೂಟಿಂಗ್ ನಡೆಸಲಾಗುತ್ತಾ ಅನ್ನೋ ಪ್ರಶ್ನೆಯಿದೆ. ಇದಕ್ಕೆ ಚಿತ್ರ ತಂಡ ಉತ್ತರಿಸಬೇಕಿದೆ.