ಇಡೀ ದಿನ ಬಿಜೆಪಿ ಅಭ್ಯರ್ಥಿಗಳ ಪರ ನಟ ಸುದೀಪ್ ಪ್ರಚಾರ

105

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ನಟ ಕಿಚ್ಚ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ಶುರು ಮಾಡಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಬೊಮ್ಮಾಯಿ ಅವರೊಂದಿಗೆ ಮೆರವಣೆಯಲ್ಲಿ ಭಾಗವಹಿಸಿ ಮತಯಾಚನೆ ಮಾಡಿದರು. ಇದಾದ ಮೇಲೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದಾರೆ.

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ಪರ ಇಂದು ಪ್ರಚಾರ ನಡೆಸಿದರು. ಹೆಲಿಕಾಪ್ಟರ್ ಮೂಲಕ ನಗರಕ್ಕೆ ಆಗಮಿಸಿದ ಸುದೀಪ್ ಪ್ರಚಾರ ನಡೆಸದ್ದಾರೆ.

ಮೊಳಕಾಲ್ಮೂರು ಮುಗಿದ ಬಳಿಕ ಜಗಳೂರು, ಮಾಯಕೊಂಡ, ದಾವಣಗೆರೆ ದಕ್ಷಿಣ ಹಾಗೂ ಉತ್ತರ ಸೇರಿ 5 ಕಡೆ ಪ್ರಚಾರ ನಡೆಸಲಿದ್ದಾರೆ. ಜಗಳೂರಲ್ಲಿ ಎಚ್.ವಿ ರಾಮಚಂದ್ರ, ಮಾಯಕೊಂಡದಲ್ಲಿ ಬಸವರಾಜ್ ನಾಯ್ಕ, ದಾವಣಗೆರೆ ಉತ್ತರ ಕ್ಷೇತ್ರದ ಲೋಕಿಕೆರೆ ನಾಗರಾಜ್, ದಕ್ಷಿಣ ಕ್ಷೇತ್ರದ ಬಿಜಿ ಅಜಯ್ ಕುಮಾರ್ ಅವರ ಪ್ರಚಾರ ನಡೆಸಲಿದ್ದಾರೆ. ಈ ವೇಳೆ ರೋಡ್ ಶೋ, ಬಹಿರಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇದೆಲ್ಲ ಮುಗಿಸಿಕೊಂಡು ವಿಜಯನಗರ ಜಿಲ್ಲೆಯ ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಶಿಲ್ಪಾ ರಾಘವೇಂದ್ರ ಪರ ಮತಯಾಚನೆ ನಡೆಸಲಿದ್ದಾರೆ. ಇದಕ್ಕಾಗಿ ಬಿಜೆಪಿ ವತಿಯಿಂದ ಅವರಿಗೆ ಖಾಸಗಿ ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!