ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ನಡೆದ ಲೈವ್ ಕಾರ್ಯಕ್ರಮದ ವೇಳೆ ನಟ ಉಪೇಂದ್ರ ಹೇಳಿದ ಗಾದೆ ಮಾತು ವಿವಾದದ ಸ್ವರೂಪ ಪಡೆದುಕೊಂಡಿದೆ. ಇದಕ್ಕೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ಇದನ್ನು ಅರಿತ ನಟ ಉಪೇಂದ್ರ ಕ್ಷಮೆ ಕೇಳಿದ್ದಾರೆ.
ಇಂದು ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ನೇರ ಪ್ರಸಾರದಲ್ಲಿ ಬಾಯಿ ತಪ್ಪಿ ಒಂದು ಗಾದೆ ಮಾತನ್ನು ಬಳಸಿದ್ದು, ಅದರಿಂದ ಹಲವರ ಭಾವನೆಗಳಿಗೆ ಧಕ್ಕೆ ಉಂಟಾಗಿರುವುದು ಕಂಡು ಬಂದ ತಕ್ಷಣವೇ ಆ ಲೈವ್ ವಿಡಿಯೋವನ್ನು ನನ್ನ ಸಾಮಾಜಿಕ ಜಾಲತಾಣದಿಂದ ಡಿಲೀಟ್ ಮಾಡಿರುತ್ತೇನೆ ಮತ್ತು ಈ ಮಾತಿಗೆ ಕ್ಷಮೆಯಿರಲಿ ಎಂದು ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.