ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಚಂದನವನದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ 12ನೇ ಪುಣ್ಯ ಸ್ಮರಣೆಯನ್ನು ಇಂದು ಆಚರಿಸಲಾಗುತ್ತಿದೆ. ವಿಷ್ಣು ಕುಟುಂಬಸ್ಥರು ಮನೆಯಲ್ಲಿಯೇ ಪೂಜೆ ಸಲ್ಲಿಸುವ ಮೂಲಕ ಸ್ಮರಣೆಯನ್ನು ಮಾಡಿಕೊಳ್ಳಲಾಯಿತು.
ಇನ್ನು ಅಭಿಮಾನಿಗಳು ನಗರದ ಅಭಿಮಾನದ ಸ್ಟುಡಿಯೋದಲ್ಲಿ ಅವರ ಸಮಾಧಿಗೆ ಪೂಜೆ ಸಲ್ಲಿಸಿ ಗೌರವ ಸಲ್ಲಿಸಲಾಗುತ್ತಿದೆ. ಚಿತ್ರರಂಗದ ಗಣ್ಯರು, ರಾಜಕೀಯ ಗಣ್ಯರು ಸೇರಿದಂತೆ ಪ್ರತಿಯೊಬ್ಬರು ವಿಷ್ಣುವರ್ಧನ್ ಅವರನ್ನು ಸ್ಮರಿಸಿಕೊಳ್ಳುತ್ತಿದ್ದಾರೆ.