ಚಿಕಿತ್ಸೆಗಾಗಿ ನಟಿ ಸುಧಾರಾಣಿ ಹೈರಾಣು: ಸಚಿವರು ಹೇಳಿದ್ದೇನು?

309

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಿರಿಯ ನಟಿ ಸುಧಾರಾಣಿ ಅವರು ಅಣ್ಣನ ಮಗಳಿಗೆ ತಡರಾತ್ರಿ ಚಿಕಿತ್ಸೆ ಕೊಡಲು ಪರದಾಡಿದ ಘಟನೆ ಸಂಬಂಧ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸಚಿವರು ಹೇಳಿದ್ದಾರೆ.

ಸಾಮಾನ್ಯ ವ್ಯಕ್ತಿಯೂ ಸಹ ಚಿಕಿತ್ಸೆಗಾಗಿ ಪರದಾಡಬಾರದು. ಖಾಸಗಿ ಆಸ್ಪತ್ರೆ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಟ್ವಿಟ್ ಮಾಡಿದ್ದಾರೆ. ನಟಿ ಸುಧಾರಾಣಿ ಅವರ ಅಣ್ಣನ ಮಗಳು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ನಿನ್ನೆ ರಾತ್ರಿ ಆಸ್ಪತ್ರೆಗೆ ಬಂದಾಗ ಚಿಕಿತ್ಸೆ ನೀಡದೆ ಬೆಡ್ ಇಲ್ಲ. ವೆಂಟಿಲೇಟರ್ ಇಲ್ಲವೆಂದು ಹೇಳಿ ದಾಖಲಿಸಕೊಂಡಿರ್ಲಿಲ್ಲ.

ನಟಿ ಸುಧಾರಾಣಿ, ತಡರಾತ್ರಿ ಪೊಲೀಸ್ ಕಮಿಷನರ್ ಭಾಸ್ಕರ ರಾವ್ ಅವರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ರು. ಪೊಲೀಸರ ಸಹಾಯ ಪಡೆದ ಬಳಿಕ ಚಿಕಿತ್ಸೆಗೆ ದಾಖಲಿಸಿಕೊಂಡಿದ್ದಾರೆ. ಹೀಗಾಗಿ ಸಚಿವರು ಖಾಸಗಿ ಆಸ್ಪತ್ರೆ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!