ಗಾಂಧಿವಾದವನ್ನು ಕಿತ್ತೊಗೆಯಬೇಕು: ನಟ ಚೇತನ್ ಅಹಿಂಸಾ

173

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆಗಳನ್ನು ಕೊಡುವ ಮೂಲಕ ಚರ್ಚೆಯಲ್ಲಿದ್ದಾರೆ. ಸುವರ್ಣ ಸೌಧದಲ್ಲಿ ಸಾವರ್ಕರ್ ಫೋಟೋ ವಿಚಾರವಾಗಿ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಬರೆದಿರುವ ಅವರು, ನಮ್ಮಂತ ಸಮಾನತಾವಾದಿಗಳಿಗೆ ಸಾವರ್ಕರ್ ಮತ್ತು ಗಾಂಧಿ ಇಬ್ಬರೂ ನಮ್ಮ ಸೈದ್ಧಾಂತಿಕ ಶತ್ರುಗಳು. ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದಿದ್ದಾರೆ.

ನೀವು ಸಾವರ್ಕರ್ ಮತ್ತು ಗಾಂಧಿ ಇಬ್ಬರ ಫೋಟೋಗಳನ್ನು ತೆಗೆದುಹಾಕುವುದು ಸೂಕ್ತ. ಇಲ್ಲವಾದರೆ ಇಬ್ಬರನ್ನೂ ಇಟ್ಟುಕೊಳ್ಳಿ ಮತ್ತು ಸುವರ್ಣಸೌಧದಲ್ಲಿ ಕನ್ನಡಿಗ ತಂದೆ ಪೆರಿಯಾರ್ ಭಾವಚಿತ್ರವನ್ನು ಸೇರಿಸಿ ಅಂತಾ ಬರೆದಿದ್ದಾರೆ.

ಅಲ್ಲದೇ, ಗಾಂಧಿಯವರ ಧಾರ್ಮಿಕ ಸಾಮರಸ್ಯ ಇಂದಿನ ಅಗತ್ಯ ಎಂದು ಪ್ರತಿಪಾದಿಸುವ ಉದಾರವಾದಿಗಳಿಗೆ ನಮ್ಮ ಸಂವಿಧಾನ ಅರ್ಥವಾಗುತ್ತಿಲ್ಲ. ಖಾಸಗಿಯಾಗಿ ನಾವೆಲ್ಲ ಧರ್ಮದ ಹಕ್ಕನ್ನು ಹೊಂದಿದ್ದೇವೆ.(ಆರ್ಟಿಕಲ್ 25) ಸಾರ್ವಜನಿಕವಾಗಿ ನಾವು ಜಾತ್ಯಾತೀತ ರಾಷ್ಟ್ರ. ಅಂದರೆ ಧರ್ಮದಿಂದ ದೂರ. ಧಾರ್ಮಿಕ ಸಾಮರಸ್ಯ ಎಂದರೆ ಅಸಮಾನತೆಯ ಸಂರಕ್ಷಣೆ. ಗಾಂಧಿವಾದವನ್ನು ಕಿತ್ತೊಗೆಯಬೇಕು ಅಂತಾ ಬರೆಯುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!