ಪತ್ರಕರ್ತ ರವಿಚಂದ್ರ ಮಲ್ಲೇದಗೆ ಆದರ್ಶ ಪತ್ರಕರ್ತ ಪ್ರಶಸ್ತಿ

248

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಮುದ್ದೇಬಿಹಾಳ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿತರಕರ ಸಂಘ ಕೊಡಮಾಡುವ ಆದರ್ಶ ಪತ್ರಕರ್ತ ಪ್ರಶಸ್ತಿಯನ್ನು ಈ ಬಾರಿ ಸಿಂದಗಿ ತಾಲೂಕಿನ ಪತ್ರಕರ್ತ ರವಿಚಂದ್ರ ಮಲ್ಲೇದ ಅವರಿಗೆ ಪ್ರದಾನ ಮಾಡಲಾಯಿತು.

ಪಟ್ಟಣದಲ್ಲಿನ ಕರ್ನಾಟಕ ಕೋ ಆಫ್ ಬ್ಯಾಂಕ್ ಸಭಾಂಗಣದಲ್ಲಿ ಶುಕ್ರವಾರ ನಡೆದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ, ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರು ಸೇರಿದಂತೆ ವಿವಿಧ ಗಣ್ಯರ ಸಮ್ಮುಖದಲ್ಲಿ ರವಿಚಂದ್ರ ಮಲ್ಲೇದ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ವೇಳೆ ಕಾನಿಪ ತಾಲೂಕು ಅಧ್ಯಕ್ಷ ಮುತ್ತು ವಡವಡಗಿ, ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣೂರ, ರಾಜ್ಯ ಕಾರ್ಯಕಾರಣಿ ಸದಸ್ಯ ಡಿ.ಬಿ ವಡವಡಗಿ ಸೇರಿದಂತೆ ವಿವಿಧ ಪದಾಧಿಕಾರಿಗಳು ಹಾಜರಿದ್ದರು.




Leave a Reply

Your email address will not be published. Required fields are marked *

error: Content is protected !!