ವ್ಯಸನ ಮುಕ್ತ ಜಾಥಾ

247

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನದ ಪ್ರಯುಕ್ತ, ತಾಲೂಕು ಆಡಳಿತ ವತಿಯಿಂದ ವ್ಯಸನ ಮುಕ್ತ ಜಾಥಾ ನಡೆಸಲಾಯಿತು. ತಹಶೀಲ್ದಾರ್ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ರಮೇಶ ಭೂಸನೂರ, ತಹಶೀಲ್ದಾರ್ ನಿಂಗಣ್ಣ ಬಿರಾದಾರ, ತಾಲೂಕು ಪಂಚಾಯ್ತಿ ಇಒ ಬಾಬು ರಾಠೋಡ ಕಾರ್ಯಕ್ರಮ ಉದ್ಘಾಟಿಸಿದರು.

ನಂತರ ಪಟ್ಟಣದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಜಾಥಾ ನಡೆಯಿತು. ಬಸವೇಶ್ವರ ಸರ್ಕಲ್ ಮಾರ್ಗದಿಂದ ಪ್ರಾರಂಭಿಸಿ ವಿವೇಕಾನಂದ ಸರ್ಕಲ್, ತೋಂಟದಶ್ರೀಗಳ ರಸ್ತೆ, ಟಿಪ್ಪು ಸುಲ್ತಾನ್ ರಸ್ತೆ ಮೂಲಕ ಹಾಯ್ದು ಡಾ.ಬಿ.ಆರ್ ಅಂಬೇಡ್ಕರ್ ಸರ್ಕಲ್ ಬಳಿ ಸಮಾಪ್ತಿಗೊಂಡಿತು.

ಈ ವೇಳೆ ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಕಾಲೇಜುಗಳ ಶಿಕ್ಷಕರು, ಸಿಬ್ಬಂದಿ ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!