ಆಧುನಿಕ ಭಗೀರಥ ಇನ್ನಿಲ್ಲ

243

ಪ್ರಜಾಸ್ತ್ರ ಸುದ್ದಿ

ಮಂಡ್ಯ: ತಮ್ಮ ಇಡೀ ಬದುಕಿನಲ್ಲಿ ಜಲರಕ್ಷಣೆಯಲ್ಲಿಯೇ ತೊಡಗಿಸಿಕೊಂಡಿದ್ದ ಆಧುನಿಕ ಭಗೀರಥ ಖ್ಯಾತಿಯ ಕಾಮೇಗೌಡ ನಿಧನರಾಗಿದ್ದಾರೆ. ಇವರ ಸಾಧನೆ ಹಾಗೂ ಜಲಸಂರಕ್ಷಣೆಯ ಕುರಿತು ಸ್ವತಃ ಪ್ರಧಾನಿ ಮೋದಿ, ಮನ್ ಕಿ ಬಾತ್ ನಲ್ಲಿ ಮಾತನಾಡಿದ್ದರು.

ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ಕಾಮೇಗೌಡ ಅವರು ಸುಮಾರು 15ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಾಣ ಮಾಡುವ ಮೂಲಕ ತಾಲೂಕಿನಾದ್ಯಂತ ಜಲಕ್ರಾಂತಿಗೆ ಸಾಕ್ಷಿಯಾದವರು. ಇವರ ನಿಧನಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!