ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ವಿಪಕ್ಷಗಳ ಜೊತೆಗೆ ಸ್ವಪಕ್ಷೀಯ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸುದ್ದಿಯಲ್ಲಿದ್ದರು. ಕಾಂಗ್ರೆಸ್ ನಾಯಕರ ಜೊತೆಗೆ ಬಿಜೆಪಿ ನಾಯಕರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಅನ್ನೋ ಗಂಭೀರ ಆರೋಪ ಮಾಡಿದ್ದರು.
ಪ್ರತಾಪ್ ಸಿಂಹ ಹೇಳಿಕೆಗೆ ಮಾಜಿ ಸಿಎಂ ಬೊಮ್ಮಾಯಿ ಸೇರಿ ಅನೇಕ ಹಿರಿಯ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ. ಏನೇ ಭಿನ್ನಾಭಿಪ್ರಾಯವಿದ್ದರೂ ಪಕ್ಷದಲ್ಲಿ ಮಾತನಾಡಬೇಕು. ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮುಜುಗರ ತಂದಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಈ ನಡುವೆ ಪ್ರತಾಪ್ ಸಿಂಹಗೆ ಎಚ್ಚರಿಕೆ ಕರೆಯೊಂದು ಬಂದಿದೆಯಂತೆ.
ಪಕ್ಷದ ನಾಯಕರು ಸಂಸದರ ಹೇಳಿಕೆ ವಿರುದ್ಧ ಆರ್ ಎಸ್ಎಸ್ ನಾಯಕರ ಗಮನಕ್ಕೆ ತಂದಿದ್ದಾರೆ. ಅಲ್ಲಿಂದ ಬಂದ ಎಚ್ಚರಿಕೆಗೆ ಸಂಸದರು ಸೈಲೆಂಟ್ ಆಗಿದ್ದಾರೆ ಎನ್ನಲಾಗುತ್ತಿದೆ. ಆರ್ ಎಸ್ಎಸ್ ನಾಯಕರು ಕಳುಹಿಸಿದ ಸಂದೇಶದಿಂದ ಸಂಸದ ಪ್ರತಾಪ್ ಸಿಂಹ ಸುಮ್ಮನಾಗಿದ್ದಾರೆ ಅನ್ನೋದು ಸಧ್ಯದ ಮಾತು.