ವಕೀಲ ಜಗದೀಶ್ ಬಿಡುಗಡೆ

209

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋರ್ಟ್ ಆವರಣದಲ್ಲಿನ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ವಕೀಲ ಜಗದೀಶ್ ಮಹಾದೇವ್ ಮಂಗಳವಾರ ರಾತ್ರಿ ಬಿಡುಗಡೆಯಾಗಿದ್ದಾರೆ. ಅವರಿಗೆ ಜಾಮೀನು ಮಂಜೂರಾಗಿದ್ದು 24 ದಿನಗಳ ಬಳಿಕ ಹೊರ ಬಂದಿದ್ದಾರೆ.

ಜೈಲಿನಿಂದ ಹೊರ ಬರುತ್ತಿದ್ದಂತೆ ಅವರ ಹಿತೈಷಿಗಳು, ಬಂಧುಗಳು, ಅಭಿಮಾನಿಗಳು ಅವರನ್ನು ಸುತ್ತುವರೆದು ಜೈಕಾರ ಹಾಕಿದರು. ಈ ವೇಳೆ ಮಾತನಾಡಿದ ಜಗದೀಶ್, ಭ್ರಷ್ಟಾಚಾರದ ವಿರುದ್ಧ ನನ್ನ ಹೋರಾಟ ಮುಂದುವರೆಯುತ್ತೆ. ಜೈಲು ನನ್ನಲ್ಲಿ ಪರಿವರ್ತನೆ ತಂದಿದೆ ಎಂದಿದ್ದಾರೆ. ಎಂದಿನಂತೆ ಫೇಸ್ ಬುಕ್ ಲೈವ್ ಮೂಲಕ ಒಂದಿಷ್ಟು ಮಾಹಿತಿ ಹಂಚಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!