ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಇಂದಿನಿಂದ 14 ದಿನಗಳ ಕಾಲ ರಾಜ್ಯದಲ್ಲಿ ಸೆಮಿ ಲಾಕ್ ಡೌನ್ ಇದೆ. ಬೆಳಗ್ಗೆ 6 ಗಂಟೆಯಿಂದ 10 ಗಂಟೆಯ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. 10 ಗಂಟೆಯ ನಂತರ ಕರ್ನಾಟಕ ಸಂಪೂರ್ಣ ಸ್ತಬ್ಧವಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶ ನೀಡಿದ್ದಾರೆ.
ಟಫ್ ರೂಲ್ಸ್ ಹೆಸರಿನಲ್ಲಿ ಜಾರಿಗೆ ಬಂದ 14 ದಿನಗಳ ಕಥೆ ಏನಾಗಿದೆ ಅನ್ನೋದು ಜನರಿಗೆ ತಿಳಿದಿದೆ. ಅಂದ್ರೆ, ಜನರೇ ಅದನ್ನ ಸರಿಯಾಗಿ ಪಾಲನೆ ಮಾಡಿಲ್ಲ. ಹೀಗಾಗಿ ಇಂದಿನಿಂದ ಮೇ 24ರ ತನಕ ಇರುವ ಸೆಮಿ ಲಾಕ್ ಯಶಸ್ವಿಯಾಗುತ್ತಾ? 10 ಗಂಟೆಯ ನಂತರ ಕರ್ನಾಟಕ ಸಂಪೂರ್ಣ ಬಂದ್ ಆಗುತ್ತಾ ಅನ್ನೋ ಪ್ರಶ್ನೆ ಮಾತ್ರ ಹಾಗೇ ಇದೆ.