ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿಧಾನಸಭಾ ಚುನಾವಣೆ ಸಂಬಂಧ ರಾಜಕೀಯ ಪಕ್ಷಗಳ ಯಾತ್ರೆ ಭರ್ಜರಿಯಾಗಿದೆ. ಜೆಡಿಎಸ್ ನಿಂದ ಪಂಚರತ್ನ ರಥಯಾತ್ರೆ, ಕಾಂಗ್ರೆಸ್ ನಿಂದ ಪ್ರಜಾಧ್ವನಿ ಬಸ್ ಯಾತ್ರೆ ನಡೆಸಲಾಗುತ್ತಿದೆ. ಇನ್ನು ಬಿಜೆಪಿಯೂ ತನ್ನ ಯಾತ್ರೆಗೆ ಸಿದ್ಧತೆ ನಡೆಸಿದೆ.
ನಗರದಲ್ಲಿ ಈ ಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಜೆಟ್ ಅಧಿವೇಶನ ಬಳಿಕ ರಾಜ್ಯದ 4 ಕಡೆಯಿಂದ ರಥಯಾತ್ರೆ ನಡೆಸಲಾಗುತ್ತೆ. ಪಕ್ಷದ ಕಾರ್ಯಕಾರಿಣಿಯಲ್ಲಿ ಹಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.
ಬೂತ್ ಮಟ್ಟದ ಕಾರ್ಯಕ್ರಮದಿಂದ ಹಿಡಿದ ಪಕ್ಷ ಸಂಘಟನೆ ಕುರಿತು ಚರ್ಚಿಸಲಾಗಿದೆ. ರಾಜ್ಯದಲ್ಲಿ ಬಿಜೆಪಿ ನಡೆಸಿದ ಜನ ಸಂಕಲ್ಪ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆಡಳಿತ ವಿರೋಧಿ ಅಲೆ ಇಲ್ಲದೆ ಚುನಾವಣೆ ನಡೆಸುತ್ತಿದ್ದೇನೆ ಅಂತಾ ವಿಶ್ವಾಸ ವ್ಯಕ್ತಪಡಿಸಿದರು.