ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರೋನಾದಿಂದಾಗಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಇದರ ನಡುವೆ ಜನರು ಮಾರ್ಗಸೂಚಿಗಳನ್ನ ಉಲ್ಲಂಘನೆ ಮಾಡ್ತಿರುವುದು ಸಾಮಾನ್ಯವಾಗಿದೆ. ಅಲ್ದೇ ಮೇ 24ಕ್ಕೆ ಲಾಕ್ ಡೌನ್ ಮುಗಿಯುತ್ತೆ ಅನ್ನೋದು ಸುಳ್ಳು. ಸೋಮವಾರದ ಬಳಿಕ ಮತ್ತಷ್ಟು ಬಿಗಿ ಕ್ರಮಗಳನ್ನ ತೆಗೆದುಕೊಳ್ಳುವುದಾಗಿ ಸರ್ಕಾರ ಹೇಳ್ತಿದೆ.
ಮುಂದಿನ ವಾರದಿಂದ ಕರೋನಾ ಕರ್ಫ್ಯೂ ಮತ್ತಷ್ಟು ಕಠಿಣವಾಗಿರಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ. ಕರೋನಾ 3ನೇ ಅಲೆ ಎದುರಿಸಲು ಸಿದ್ಧವಾಗಬೇಕಿದ್ದು, ಮುಂದಿನ ವಾರದಿಂದ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.