ಪ್ರಜಾಸ್ತ್ರ ಸುದ್ದಿ
ಮೈಸೂರು: ರಾಜ್ಯದಲ್ಲಿ ಲಾಕ್ ಡೌನ್ ತೆರವು ಮಾಡಿದ ಬಳಿಕ ಅಪರಾಧ ಕೃತ್ಯಗಳು ಜಾಸ್ತಿಯಾಗ್ತಿವೆ ಎಂದು ಸ್ವತಃ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತ್ನಾಡಿ ಮಾಹಿತಿ ನೀಡಿದ್ರು.
ರಾಜ್ಯದಲ್ಲಿ 50 ಕೋಟಿಯಷ್ಟು ಡ್ರಗ್ಸ್ ನಾಶ ಮಾಡಲಾಗಿದೆ. ಇದು 5 ವರ್ಷದಷ್ಟು ಡ್ರಗ್ಸ್ ಒಂದೇ ವರ್ಷದಲ್ಲಿ ಸಂಗ್ರಹವಾಗಿದೆ. ವಿದೇಶದಿಂದ ಡಾರ್ಕ್ ವೆಬ್ ನಲ್ಲಿ ಬರ್ತಿದೆ. ಇದನ್ನ ನಮ್ಮ ಪೊಲೀಸರು ಯಶಸ್ವಿಯಾಗಿ ತಡೆಗಟ್ಟುತ್ತಿದ್ದಾರೆ ಅಂತಾ ಹೇಳಿದ್ರು.