ಪ್ರಜಾಸ್ತ್ರ ಸುದ್ದಿ
ಕೊಡಗು: ನೆರೆಯ ಕೇರಳದಲ್ಲಿ ಮತ್ತೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಅಲ್ಲಿ ಸೋಂಕಿತರ ಪ್ರಮಾಣ ಹೆಚ್ಚುತ್ತಿರುವುದರಿಂದ, ರಾಜ್ಯದ ಗಡಿಯಲ್ಲಿ ತಪಾಸಣೆ ಭರದಿಂದ ಸಾಗಿದೆ. ಆರೋಗ್ಯ ಇಲಾಖೆಯಿಂದ ತಪಾಸಣೆ ನಡೆಸಲಾಗುತ್ತಿದೆ.
ಕೇರಳದಿಂದ ರಾಜ್ಯಕ್ಕೆ ಪ್ರವೇಶಿಸುವ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಪ್ರಯಾಣಿಕರಲ್ಲಿ ಕೋವಿಡ್ ಸೋಂಕಿನ ಲಕ್ಷಣ ಕಂಡು ಬಂದರೆ ವಿರಾಜಪೇಟೆಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗುತ್ತಿದೆ.
ಇದೇ ರೀತಿ ಮೈಸೂರು, ಚಾಮರಾಜನಗರ ಸೇರಿದಂತೆ ಹಳೇ ಮೈಸೂರು ಭಾಗಕ್ಕೂ ಹೊಂದಿಕೊಂಡಿರುವ ಕೇರಳ ಗಡಿಯ ಮೂಲಕ ಕರ್ನಾಟಕ ಪ್ರವೇಶಿಸುವ ವಾಹನಗಳ ತಪಾಸಣೆ ಸಹ ಮಾಡಲಾಗುತ್ತಿದೆ.