ನವದೆಹಲಿ/ಕೊಲ್ಕತ್ತಾ: ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರಕ್ಕೆ ಸಂಬಂಧಿಸಿದಂತೆ ದೇಶ್ಯಾದ್ಯಂತ ಪ್ರತಿಟನೆ ನಡೆಯುತ್ತಿವೆ. ಉತ್ತರ ಪ್ರದೇಶದಲ್ಲಿ ನಡೆದ ಹಿಂಸಾತ್ಮಕ ಕೃತ್ಯ ಹಾಗೂ ಕೇರಳದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಧ್ಯೆ ನಡೆದ ಆರ್ಥಿಕ ವ್ಯವಹಾರದ ಬಗ್ಗೆ ಇಡಿ ಮಾಹಿತಿ ಕಲೆ ಹಾಕಿದೆ.
ಸಿಎಎ ಸಂಸತ್ತಿನಲ್ಲಿ ಅಂಗೀಕಾರಗೊಂಡ್ಮೇಲೆ ಉತ್ತರ ಪ್ರದೇಶದ 73 ವಿವಿಧ ಖಾತೆಗಳಿಗೆ 120 ಕೋಟಿ ರೂಪಾಯಿ ಜಮಾ ಆಗಿರುವುದು ಕಂಡು ಬಂದಿದೆ. ಸ್ವಲ್ಪ ಹಣ ಉಳಿಸಿ ಎಲ್ಲ ಹಣವನ್ನ ಬಳಸಿಕೊಳ್ಳಲಾಗಿದೆ. ಪೌರತ್ವ ಕಾಯ್ದೆ ವಿರುದ್ಧದ ಹಿಂಸಾತ್ಮಕ ಹೋರಾಟಕ್ಕೆ ಇದನ್ನ ಬಳಸಿಕೊಳ್ಳಲಾಗಿದೆ ಅನ್ನೋ ಅನುಮಾನ ವ್ಯಕ್ತವಾಗಿದೆ.
ಇನ್ನು ಪಶ್ಚಿಮ ಬಂಗಾಳದಲ್ಲಿ ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ನಿರ್ಣಯ ಅಂಗೀಕರಿಸಲಾಗಿದೆ. ಸಿಎಎ ರದ್ದುಗೊಳಿಸಬೇಕೆಂದು ಆಗ್ರಹಿಸಿ ವಿಧಾನಸಭೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರ ನಿರ್ಣಯ ಅಂಗೀಕರಿಸಿದೆ. ಈ ಮೂಲಕ ಸಿಎಎ ವಿರೋಧಿಸಿದ ನಾಲ್ಕನೇ ರಾಜ್ಯವಾಗಿದೆ.
ಬಿಜೆಪಿಯೇತರ ಸರ್ಕಾರವಿರುವ ಕೇರಳ, ರಾಜಸ್ಥಾನ್, ಪಂಜಾಬ್ ಬಳಿಕ ಇದೀಗ ಪಶ್ಚಿಮ ಬಂಗಾಳದಲ್ಲಿ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಲಾಗಿದೆ.