ಪ್ರಜಾಸ್ತ್ರ ಸುದ್ದಿ
ನವದೆಹಲಿ: ಸೇನೆಯಲ್ಲಿ 4 ವರ್ಷಗಳ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಅಗ್ನಿಪಥ್ ಅನ್ನೋ ಯೋಜನೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಜಾರಿಗೆ ತರಲು ಸಿದ್ಧವಾಗಿದೆ. ಇದರ ವಿರುದ್ಧ ದೇಶದ ತುಂಬಾ ಆಕ್ರೋಶ ವ್ಯಕ್ತವಾಗುತ್ತಿದೆ. ಉತ್ತರ ಭಾರತದ ಪ್ರತಿಭಟನೆ ಕಿಚ್ಚು ದಕ್ಷಿಣ ಭಾರತಕ್ಕೂ ಕಾಲಿಟ್ಟಿದೆ.
ಈ ಹೋರಾಟದಲ್ಲಿ ಇದೀಗ ಓರ್ವ ಯುವಕ ಪ್ರಾಣ ಕಳೆದುಕೊಂಡಿದ್ದಾನೆ. ಪೊಲೀಸರ ಗುಂಡೇಟಿಗೆ ಯುವಕನೊಬ್ಬ ಬಲಿಯಾಗಿದ್ದಾನೆ. ಸಿಕಂದರಬಾದ್ ನಲ್ಲಿ ಪೊಲೀಸರು ಫೈಯರಿಂಗ್ ನಡೆಸಿದ್ದಾರೆ. ಇದರಿಂದಾಗಿ ಓರ್ವ ಸಾವನ್ನಪ್ಪಿದ್ದಾನೆ.