ಪ್ರಜಾಸ್ತ್ರ ಸುದ್ದಿ
ನವದೆಹಲಿ: ಅಗ್ನಿಪಥ್ ಯೋಜನೆಯ ಮೂಲಕ ಅರೆಕಾಲಿಕ ಸೇನಾಪಡೆ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಧಾನಿ ಮೋದಿ ಮಾಫಿವೀರ್ ಆಗಬೇಕು ಎಂದಿದ್ದಾರೆ.
ಸತತ 8 ವರ್ಷಗಳಿಂದ ಜೈ ಜವಾನ್ ಜೈ ಕಿಸಾನ್ ಅನ್ನೋ ಮೌಲ್ಯಗಳಿಗೆ ಅವಮಾನ ಮಾಡಿಕೊಂಡು ಬರಲಾಗುತ್ತಿದೆ. ಕೃಷಿ ಕಾಯ್ದೆ ಹಿಂಪಡೆಯಬೇಕೆಂದು ಈ ಹಿಂದೆ ಒತ್ತಾಯಿಸಲಾಗಿತ್ತು. ಅದೇ ರೀತಿ ಕೂಡಲೇ ಅಗ್ನಿಪಥ್ ಯೋಜನೆ ಹಿಂಪಡೆಯಬೇಕು ಎಂದಿದ್ದಾರೆ.