ವಿರೋಧದ ನಡುವೆಯೂ ಕೃಷಿ ಮಸೂದೆ ಮಂಡನೆ

431

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಸಾಕಷ್ಟು ವಿರೋಧದ ನಡುವೆಯೂ ಮಳೆಗಾಲದ ಅಧಿವೇಶನದಲ್ಲಿ ಕೃಷಿ ಮಸೂದೆ ಮಂಡನೆಯಾಗಿದೆ. ಕೃಷಿಗೆ ಸಂಬಂಧಿಸಿದ 2 ಮಸೂದೆಗಳಿಗೆ ಧ್ವನಿ ಮತದ ಮೂಲಕ ಅಂಗೀಕಾರ ನೀಡಲಾಗಿದೆ.

ಬೆಲೆ ಖಾತರಿ ಹಾಗೂ ಕೃಷಿ ಸೇವೆಗಳಿಗೆ ರೈತರ ಒಪ್ಪಿಗೆ ಮತ್ತು ರೈತರ ಉತ್ಪನ್ನ ವ್ಯಾಪಾರ –ವಾಣಿಜ್ಯ ಅನ್ನೋ ಎರಡು ಮಸೂದೆಗಳು ಅಂಗೀಕಾರಗೊಂಡಿವೆ. ಇದನ್ನ ಖಂಡಿಸಿ ಕಾಂಗ್ರೆಸ್, ಡಿಎಂಕೆ ಹಾಗೂ ರೆವಲೂಷನರಿ ಸೋಷಿಯಲಿಟ್ಸ್ ಪಕ್ಷದ ಸಂಸದರ ಸಭಾತ್ಯಾಗ ಮಾಡಿದ್ರು.

ಈ ಮಸೂದೆಯನ್ನ ವಿರೋಧಿಸಿ ದೇಶದಲ್ಲಿ ಪ್ರತಿಭಟನೆಯಾಗ್ತಿವೆ. ಈ ಬಗ್ಗೆ ಮಾತ್ನಾಡಿರುವ ಮೋದಿ, ಪ್ರತಿಪಕ್ಷಗಳು ರೈತರ ಹಾದಿ ತಪ್ಪಿಸುವ ಕೆಲಸ ಮಾಡ್ತಿವೆ. ಅವರ ಮಾತುಗಳಿಗೆ ಕಿವಿ ಕೊಡಬೇಡಿ ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!