ನಿನ್ನೆ ಬೈಕ್.. ಇಂದು ಬಿಎಂಟಿಸಿ ಏರಿದ ರಾಹಲ್

110

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನಕ್ಕೆ ಇನ್ನು ಕೇವಲ 2 ದಿನ ಬಾಕಿ ಉಳಿದಿದೆ. ರಾಜಕೀಯ ನಾಯಕರ ಪ್ರಚಾರ ಜೋರಾಗಿದೆ. ಸಿಲಿಕಾನ್ ಸಿಟಿಯಲ್ಲಿ ಪ್ರಧಾನಿ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರ ಬಿರುಸಿನಿಂದ ಕೂಡಿದೆ. ನಿನ್ನೆ ಬೈಕ್ ಏರಿ ಸಂಚಾರ ನಡೆಸಿದ್ದ ರಾಹುಲ್ ಗಾಂಧಿ, ಇಂದು ಬಿಎಂಟಿಸಿ ಬಸ್ ನಲ್ಲಿ ಪ್ರಯಾಣ ಮಾಡಿದ್ದಾರೆ.

ಸಾಮಾನ್ಯ ಜನರ ಸಮಸ್ಯೆಗಳನ್ನು, ಅವರ ಬೇಕು ಬೇಡಿಕೆಗಳನ್ನು ಕೇಳಲು ಅವರೊಂದಿಗೆ ಬೆರೆಯುತ್ತಿದ್ದಾರೆ. ಆಹಾರ ವಿತರಣಕಾರರ ಸಮಸ್ಯೆ ಕೇಳಿದರು. ಕಾಫಿ ಡೇಯಲ್ಲಿ ಗ್ರಾಹಕರೊಂದಿಗೆ ಚರ್ಚಿಸಿದರು. ಅಲ್ಲಿಂದ ಸೀದಾ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬಂದು ಬಸ್ ಹತ್ತಿದರು.

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರೊಂದಿಗೆ, ವಿದ್ಯಾರ್ಥಿನಿಯರೊಂದಿಗೆ ಚರ್ಚಿಸಿ ಅವರೊಂದಿಗೆ ಹಲವು ವಿಚಾರಗಳ ಕುರಿತು ಚರ್ಚಿಸಿದರು. ಅವರಿಗೆ ಕಾಂಗ್ರೆಸ್ ಗ್ಯಾರೆಂಟಿ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ಅವರ ಮನವಿಗಳನ್ನು ಸ್ವೀಕರಿಸಿ ತಮ್ಮ ಸರ್ಕಾರ ರಚನೆಯಾದ ಮೇಲೆ ಅವುಗಳ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!