ಪ್ರಜಾಸ್ತ್ರ ಸುದ್ದಿ
ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ನಾಯಕ, ಸಂಸದ ರಾಹುಲ್ ಗಾಂಧಿ ಅವರಿಗೆ 43ನೇ ಹುಟ್ಟು ಹಬ್ಬದ ಸಂಭ್ರಮ. ಆದರೆ, ತಮ್ಮ ಹುಟ್ಟು ಹಬ್ಬವನ್ನು ಎಲ್ಲಿಯೂ ಆಚರಿಸಬೇಡಿ ಎಂದು ಕಾರ್ಯಕರ್ತರಿಗೆ, ಬೆಂಬಲಿಗರಿಗೆ, ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
ಅಗ್ನಿಪಥ್ ಯೋಜನೆ ವಿರೋಧಿಸಿ ಎಲ್ಲೆಡೆ ಪ್ರತಿಭಟನೆ ನಡೆಯುತ್ತಿವೆ. ಇಂದು ಕಾಂಗ್ರೆಸ್ ವತಿಯಿಂದ ದೆಹಲಿಯ ಜಂತರ್ ಮಂತರ್ ನಲ್ಲಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಹೀಗಾಗಿ ಹುಟ್ಟು ಹಬ್ಬ ಆಚರಿಸದಂತೆ ಮನವಿ ಮಾಡಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ಹಿರಿಯರು, ಕಾರ್ಯಕರ್ತರು ಶುಭ ಹಾರೈಸುತ್ತಿದ್ದಾರೆ.