ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಎಐಸಿಸಿ ಅಧ್ಯಕ್ಷೀಯ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯತ್ತಿದೆ. ಸಂಜೆ 4 ಗಂಟೆಯವರೆಗೂ ಮತದಾನ ನಡೆಯಲಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಶಾಸಕರು, ವಿಧಾನ ಪರಿಷತ್ ಸದಸ್ಯರು ಸಿಲಿಕಾನ್ ಸಿಟಿಯಲ್ಲಿದ್ದು, ಮತದಾನದಲ್ಲಿ ಪಾಲ್ಗೊಂಡಿದ್ದಾರೆ.
ಭಾರತ ಐಕ್ಯತಾ ಯಾತ್ರೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಿರುವುದರಿಂದ ಬಳ್ಳಾರಿಯಲ್ಲಿ ನಿರ್ಮಿಸಲಾಗಿರುವ ಮತದಾನದ ಕ್ಯಾಂಪ್ ನಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಸಂಸದೆ ಡಿ.ಕೆ ಸುರೇಶ್ ಸೇರಿ ಇತರರು ಮತದಾನ ಮಾಡಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್ ನಾಯಕ ಬಿ.ಕೆ ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ನಾಯಕರು ಮತ ಚಲಾಯಿಸುತ್ತಿದ್ದಾರೆ. ಕಣದಲ್ಲಿ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಶಶಿ ತರೂರ್ ಇದ್ದಾರೆ.