ಗಗನಸಖಿ ಕೊಲೆ ಆರೋಪಿ ಆತ್ಮಹತ್ಯೆ!

304

ಪ್ರಜಾಸ್ತ್ರ ಸುದ್ದಿ

ಮುಂಬೈ: ಸೆಪ್ಟೆಂಬರ್ 4ರ ರಾತ್ರಿ ಏರ್ ಹೋಸ್ಟ್ ಆಗಿ ಕೆಲಸ ಮಾಡುತ್ತಿದ್ದ ಛತ್ತೀಸಗಡ ಮೂಲದ ರೂಪಾಲಿ ಓಗ್ರೆ(24) ಕೊಲೆ ಪ್ರಕರಣದ ಆರೋಪಿ, ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆರೋಪಿ ವಿಕ್ರಮ್ ಅತ್ವಾಲ್ ಪೋವಾಯಿ ಠಾಣೆಯ ಪೊಲೀಸರು ವಿಚಾರಣೆ ನಡೆಸುತ್ತಿದ್ದರು. ಶೌಚಾಲಯಕ್ಕೆ ಹೋಗಿ ಬರತ್ತೇನೆ ಎಂದು ಹೋದವನು ತನ್ನ ಬಟ್ಟೆಯಿಂದಲೇ ನೇಣು ಹಾಕಿಕೊಂಡಿದ್ದಾನೆ. ಇತನಿಗೆ ಹೆಂಡ್ತಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

ಗಗನಸಖಿಯಾಗಿ ಕೆಲಸಕ್ಕೆ ಸೇರಿಕೊಂಡಿದ್ದ ರೂಪಾಯಿ, ಸುಮಾರು 6ತಿಂಗಳ ಹಿಂದೆ ಮುಂಬೈಗೆ ಬಂದು ಸಹೋದರಿಯ ಜೊತೆಗೆ ಅಂದೇರಿಯ ಶಕ್ತಿ ಕೇಂದ್ರದಲ್ಲಿನ ಕಾಂಪ್ಲೆಕ್ಸ್ ನಲ್ಲಿ ವಾಸವಾಗಿದ್ದಳು. ಸೆಪ್ಟೆಂಬರ್ 4ರ ರಾತ್ರಿ ಭೀಕರ ಕೊಲೆಯಾಗಿತ್ತು.

ಇವರು ಉಳಿದುಕೊಂಡಿದ್ದ ಅಪಾರ್ಟ್ ಮೆಂಟ್ ನಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದ ವಿಕ್ರಮ್ ಅತ್ವಾಲ್ ನನ್ನು ಪೊಲೀಸರು ವಶಕ್ಕೆ ಪಡೆದು ಕೋರ್ಟ್ ಒಪ್ಪಿಗೆ ಮೇರೆಗೆ ವಿಚಾರಣೆ ನಡೆಸುತ್ತಿದ್ದರು. ಇದೀಗ ನೋಡಿದರೆ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!