ಬೆಂಗಳೂರು: ವಿದೇಶದಲ್ಲಿ ಸಿಲುಕಿಹಾಕಿಕೊಂಡಿರುವ ಭಾರತೀಯರನ್ನ ಕರೆತರಲು ಕೇಂದ್ರ ಸರ್ಕಾರ ಮುಂದಾಗಿದೆ. ಹೀಗಾಗಿ ಇಂದು ರಾತ್ರಿ ನೂರಾರು ಜನ ಸ್ವದೇಶಕ್ಕೆ ಬರುವ ನಿರೀಕ್ಷೆಯಿದೆ. ಹೀಗಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ತಪಾಸಣೆ ಹಾಗೂ ಕ್ವಾರಂಟೈನ್ ಗೆ ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ.
ಅಮೆರಿಕ, ಇಂಗ್ಲೆಂಡ್, ಜರ್ಮನ್ ಸೇರಿದಂತೆ 13 ರಾಷ್ಟ್ರಗಳಿಂದ ಭಾರತೀಯರು ಆಗಮಿಸ್ತಿದ್ದಾರೆ. ಅದರಲ್ಲಿ ಸುಮಾರು 700 ಜನ ಬೆಂಗಳೂರಿಗೆ ಬರುವ ನಿರೀಕ್ಷೆಯಿದೆ. ಹೀಗಾಗಿ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ. ಸೋಂಕಿನ ಲಕ್ಷಣಗಳು ಕಂಡು ಬಂದವರನ್ನ ರಾಜೀವ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗುವುದು. ಉಳಿದ ಪ್ರಯಾಣಿಕರನ್ನ ನಗರದ ಕ್ವಾರಂಟೈನ್ ಸೆಂಟರ್ ಗಳಿಗೆ ಕಳುಹಿಸಲಾಗುವುದು ಎಂದು ಗ್ರಾಮಾಂತರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.