ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರದಿಂದ ರಾಹುಲ್ ಗಾಂಧಿ ಹಿಂದೆ ಸರಿದಿಲ್ಲ ಎನ್ನಲಾಗ್ತಿದೆ. ಹೀಗಾಗಿ ಕಾಂಗ್ರೆಸ್ ನ ಹಿರಿಯ ಮುಖಂಡರಿಗೆ ಇದು ಬಿಸಿ ತುಪ್ಪವಾಗಿ ಪರಿಣಮಿಸಿದೆ. ರಾಗಾ ಮನಸ್ಸು ಬದಲಿಸಲು ಎಲ್ಲ ರೀತಿಯ ಪ್ರಯತ್ನಗಳಾಗಿದ್ರೂ ನಡೆದಿಲ್ಲ. ಹೀಗಾಗಿ ಕೈ ಹಿರಿಯ ನಾಯಕ ಎ.ಕೆ ಆ್ಯಂಟನಿ ಎಐಸಿಸಿ ಹಂಗಾಮಿ ಅಧ್ಯಕ್ಷ ಮಾಡುವ ಚಿಂತನೆ ನಡೆಸಿದ್ದಾರೆ ಎನ್ನಲಾಗ್ತಿದೆ.
ಲೋಕಸಭಾ ಚುನಾವಣೆ ಸೋಲಿನ ಬಳಿಕ ರಾಹುಲ್ ಗಾಂಧಿ ಈ ನಿರ್ಧಾರ ಪ್ರಕಟಿಸಿದ್ದಾರೆ. ಅಂದಿನಿಂದ ಇವತ್ತಿನವರೆಗೂ ಅವರ ನಿರ್ಧಾರದಲ್ಲಿ ಬದಲಾವಣೆ ಕಂಡು ಬಂದಿಲ್ಲ. ಹೀಗಾಗಿ ಹಂಗಾಮಿ ಅಧ್ಯಕ್ಷರ ನೇಮಕದ ಚರ್ಚೆ ನಡೆದಿದ್ದು, ಆ್ಯಂಟನಿ ಆ ಸ್ಥಾನ ತುಂಬಲಿದ್ದಾರೆ ಅಂತಾ ಹೇಳಲಾಗ್ತಿದೆ.