ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಗುರುವಾರ ಭರ್ಜರಿಯಾಗಿ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಸಾಕಷ್ಟು ಅನಾಹುತ ಸೃಷ್ಟಿಯಾಗಿದೆ. ಧಾರಾಕಾರ ಮಳೆಯಿಂದಾಗಿ ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಅನೇಕ ಮನೆಗಳ ಸೀಟ್ ಹಾರಿ ಹೋಗಿವೆ.
ತಾಲೂಕಿನ ಕುರಿಹಾಳ ಗ್ರಾಮದಲ್ಲಿ ನಾಲ್ಕು ವಿದ್ಯುತ್ ಕಂಬಗಳು ಬಿದ್ದಿವೆ. ವಿರಭದ್ರೇಶ್ವರ ದೇವಸ್ಥಾನದ ಹತ್ತಿರವಿದ್ದ ಭಕ್ತರ ರೂಮಿನ ಸೇಟ್ ಮುರಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಆಗಿಲ್ಲ. ಒಟ್ಟಿನಲ್ಲಿ ಅಕಾಲಿಕ ಮಳೆ ಜಿಲ್ಲೆಯಲ್ಲಿ ಜನರಿಗೆ ಒಂದಿಷ್ಟು ಹೈರಾಣು ಮಾಡಿದೆ.