‘ಎಲ್ಲ ಭ್ರಷ್ಟಾಚಾರ ನಡೆದಿದ್ದು ಕಾಂಗ್ರೆಸ್ ಕಾಲದಲ್ಲಿ’

162

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಬೆಂಗಳೂರಲ್ಲಿ ರಾಜಕಾಲುವೆ ಮುಚ್ಚುವುದಕ್ಕೆ, ಅತಿಕ್ರಮಣಕ್ಕೆ, ರಾಜಕಾಲುವೆ ಹೆಸರಲ್ಲಿ ಭ್ರಷ್ಟಾಚಾರ ಮಾಡಿದ್ದು ಕಾಂಗ್ರೆಸ್. ಹತ್ತು ಹಲವು ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಮುಳುಗಿದೆ. ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲಿ ಪಿಎಚ್ ಡಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಭ್ರಷ್ಟಾಚಾರ ಅವಿಭಾಜ್ಯ ಅಂಗ. ಸಂವಿಧಾನಾತ್ಮಕವಾಗಿದ್ದ ಲೋಕಾಯುಕ್ತ ಮುಚ್ಚಿದ್ದು ಕಾಂಗ್ರೆಸ್. ಕಾಂಗ್ರೆಸ್ ನಾಯಕರ ವಿರುದ್ಧ ಎಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ಎಸಿಬಿ ಕೊಟ್ಟು ಮುಚ್ಚು ಹಾಕಿಸಿದರು. ಈಗ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ಮರು ಶಿಫಾರಸು ಮಾಡುತ್ತಿದ್ದೇವೆ ಎಂದರು.




Leave a Reply

Your email address will not be published. Required fields are marked *

error: Content is protected !!