ಪ್ರಥಮ ಪಿಯುಸಿ ವಿದ್ಯಾರ್ಥಿಗಳೆಲ್ಲರೂ ಪಾಸ್

325

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರು ಗುಡ್ ನ್ಯೂಸ್ ನೀಡಿದ್ದು, ಎಲ್ಲ ವಿದ್ಯಾರ್ಥಿಗಳನ್ನ ಪಾಸ್ ಮಾಡಿ ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು ಎಂದಿದ್ದಾರೆ.

ಕರೋನಾ ಸೋಂಕು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ಜೈಲು 16ರಿಂದ 27ರ ತನಕ ನಿಗದಿಯಾಗಿದ್ದ ಪೂರಕ ಪರೀಕ್ಷೆಯನ್ನ ರದ್ದು ಮಾಡಲಾಗಿದೆ. ಹೀಗಾಗಿ ಪಾಸ್ ಆಗಲು ಬೇಕಾಗಿರುವ ಅಂಕಗಳನ್ನು ಆಯಾ ಕಾಲೇಜು ಹಂತದಲ್ಲಿಯೇ ನೀಡಲಾಗುತ್ತೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ ಹೇಳಿದ್ದಾರೆ.

ಪ್ರಥಮ ಪಿಯುಸಿಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಜುಲೈ 16ರಿಂದ 27ರೊಳಗೆ ಪೂರಕ ಪರೀಕ್ಷೆ ನಡೆಸಲು ಸುತ್ತೋಲೆ ಹೊರಡಿಸಿದ್ರು. ಆದ್ರೆ, ಈಗ ಕರೋನಾ ಪರಿಸ್ಥಿತಿ ಗಂಭೀರವಾಗಿದ್ದು, ಪರೀಕ್ಷೆ ರದ್ದು ಮಾಡಲಾಗಿದೆ. ಆದ್ರಿಂದ ಎಲ್ಲ ವಿದ್ಯಾರ್ಥಿಗಳನ್ನ ಪಾಸ್ ಮಾಡಲಾಗ್ತಿದೆ. ಒಂದೂ ಪರೀಕ್ಷೆ ಬರೆಯದ, ಹಾಜರಾತಿ ಕಡಿಮೆಯಿರುವ ವಿದ್ಯಾರ್ಥಿಗಳಿಗೆ ಮುಂದಿನ ಕ್ಲಾಸ್ ನಲ್ಲಿ ಒಂದು ಪರೀಕ್ಷೆ ನೀಡಿ ಅದರ ಆಧಾರದ ಮೇಲೆ ಫಲಿತಾಂಶ ನೀಡಲಾಗುತ್ತೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!