ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೋವಿಡ್ 2ನೇ ಅಲೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಸರ್ವಪಕ್ಷ ಸಭೆ ಕರೆದಿರುವುದಕ್ಕೆ, ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ ವಾಗ್ದಾಳಿ ನಡೆಸಿದ್ದಾರೆ. ಇಷ್ಟು ದಿನಗಳ ಕಾಲ ಯಾರ ಮಾತು ಕೇಳಿಲ್ಲ. ಯಾವ ಸಲಹೆಗಳನ್ನ ಆಲಿಸಿಲ್ಲ. ಪರಿಸ್ಥಿತಿ ಕೈ ಮೀರಿದ್ಮೇಲೆ ಸರ್ವಪಕ್ಷ ಸಭೆ ಕರೆದಿರುವುದು ದೊಡ್ಡ ವಿಚಾರವಲ್ಲ ಎಂದಿದ್ದಾರೆ.
ಜನರು ಈಗಾಗ್ಲೇ ಸಾಕಷ್ಟು ಹೈರಾಣಾಗಿದ್ದಾರೆ. ಲಾಕ್ ಡೌನ್ ಮಾಡುವುದು ಸರಿ ಅಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳಲಿ ಹಾಗೂ ಆರ್ಥಿಕ ನೆರವು ನೀಡಿಲಿ. ಹೀಗಾಗಿ ಲಾಕ್ ಡೌನ್ ಅವಶ್ಯಕತೆಯಿಲ್ಲ ಅನ್ನೋದು ನನ್ನ ವೈಯಕ್ತಿಕ ನಿರ್ಧಾರ ಎಂದಿದ್ದಾರೆ.