ಪ್ರಜಾಸ್ತ್ರ ಸುದ್ದಿ
ದಾವಣಗೆರೆ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರದ ಆರೋಪದ ಬಗ್ಗೆ ಬುಧವಾರ ಮುಖ್ಯಮಂತ್ರಿ ಪ್ರತಿಕ್ರಿಯೆ ನೀಡಿದ್ದಾರೆ. ಹೊನ್ನಳ್ಳಿಗೆ ತೆರಳುವ ಮುನ್ನ ಮಾತನಾಡಿದ ಅವರು, ಚುನಾವಣೆಗಳು ಬಂದಾಗ ವಿರೋಧ ಪಕ್ಷಗಳು ಆರೋಪ ಮಾಡುವುದು ರೂಢಿ ಎಂದರು.
ಈ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಆಡಿಯೋ ವಿಚಾರ ಹಾಗೂ ಬಂಧಿತರ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ಬಳಿಕ ಯಾರು ತಪ್ಪಿತಸ್ಥರು ಎಂದು ಹೊರ ಬರಲಿದೆ ಅಂತಾ ತಿಳಿಸಿದರು.
ಬೀದಿಬದಿ ವ್ಯಾಪಾರಿಗಳಿಂದ ಸುಂಕ ಸಂಗ್ರದ ಗುತ್ತಿಗೆ ಅವಧಿ ವಿಸ್ತರಣೆಕ್ಕೆ ಸಂಬಂಧಿಸಿದಂತೆ ಪಾಲಿಕೆ ವ್ಯವಸ್ಥಾಪಕ ವೆಂಕಟೇಶ್ ಹಾಗೂ ಗುತ್ತಿಗೆದಾರ ಎಂ.ಕೃಷ್ಣ ಅವರೊಂದಿಗೆ ನಡೆದ ಮಾತುಕತೆಯಲ್ಲಿ, ಸಚಿವ ಬೈರತಿ ಬಸವರಾಜ ಅವರಿಗೆ 15 ಲಕ್ಷ ರೂಪಾಯಿ ಲಂಚ ನೀಡಲಾಗಿದೆ ಅನ್ನೋದರ ಕುರಿತಿ ಆಡಿಯೋ ಲೀಕ್ ಆಗಿ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ. ಇದನ್ನು ಸಚಿವ ಬೈರತಿ ಬಸವರಾಜ ತಳ್ಳಿ ಹಾಕಿದ್ದು, ನನ್ನ ಹೆಸರಿಗೆ ಕಳಂಕ ತರುವ ಷಡ್ಯಂತ್ರ ಎಂದಿದ್ದಾರೆ.