ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಎಂ ಕಚೇರಿಯಲ್ಲಿ ಕೇವಲ ಶಾಸಕರ ಪತ್ರ ತೆಗೆದುಕೊಂಡು ಬಂದರೆ ಆಗಲ್ಲ. ಲಂಚ ಕೊಡದೆ ಯಾವುದೇ ಕೆಲಸ ಆಗಲ್ಲ ಎಂದು ಆರೋಪಿಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಮಾತಿಗೆ ಮಾಜಿ ಸಿಎಂ ಬೊಮ್ಮಾಯಿಯೂ ಧ್ವನಿಗೂಡಿಸಿದ್ದಾರೆ.
ಯಾವುದೋ ಸಣ್ಣ ಹುದ್ದೆ ಇರಬೇಕು. ಅದ್ಕೆ 30 ಲಕ್ಷ ರೂಪಾಯಿ ಕೇಳಿದ್ದಾರೆ. ಅಲ್ಲಿ ಕೋಟ್ಯಾಂತರ ರೂಪಾಯಿ ಕೇಳುತ್ತಾರೆ. ಐಎಎಸ್, ಐಪಿಎಸ್ ಅಧಿಕಾರಿಗಳ ಮಾತೆ ಸ್ಪಷ್ಟ ಸಾಕ್ಷಿ. ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ ಅಂತಾ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಇನ್ನು ವಿಪಕ್ಷ ನಾಯಕನ ಆಯ್ಕೆ ಪ್ರಶ್ನೆಗೆ ಉತ್ತಿರಿಸದ ಅವರು, ನಾಳೆಯಿಂದ ಅಧಿವೇಶನ ಅಧಿಕೃತವಾಗಿ ಶುರುವಾಗುತ್ತೆ. ನಮ್ಮಲ್ಲಿರುವ 66 ಶಾಸಕರು ಸಮರ್ಥರಿದ್ದಾರೆ ಅಂತಾ ಕೈ ನಾಯಕರಿಗೆ ತಿರುಗೇಟು ನೀಡಿದರು.