ಇಬ್ಬರು ಸಚಿವರು ರಾಜೀನಾಮೆಗೆ ಮುಂದಾದ್ರಾ?

144

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಶನಿವಾರ 24 ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆದಿದೆ. ಭಾನುವಾರ ರಾತ್ರಿ ಖಾತೆ ಹಂಚಿಕೆಯಾಗಿದೆ. ಇದಕ್ಕೂ ಮೊದಲು ವೈರಲ್ ಆಗಿದ್ದ ಖಾತೆ ಹಂಚಿಕೆ ನಕಲಿ ಎನ್ನಲಾಗಿತ್ತು. ಆದರೆ, ಭಾನುವಾರ ತಡರಾತ್ರಿ ಅಂತಿಮಗೊಂಡ ಪಟ್ಟಿ ಬಹುತೇಕ ಅದೆಯಾಗಿದೆ.

ಇದೀಗ ಇಬ್ಬರು ಹಿರಿಯ ನಾಯಕರು ತಮಗೆ ನೀಡಿದ ಖಾತೆಯಿಂದ ಅಸಮಾಧಾನಗೊಂಡಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಕೊರಟಗೆರೆ ಶಾಸಕ ಡಾ.ಜಿ ಪರಮೇಶ್ವರಗೆ ಗೃಹ ಖಾತೆ ನೀಡಲಾಗಿದೆ. ಇನ್ನು ಬೆಂಗಳೂರಿನ ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆ ನೀಡಲಾಗಿದೆ.

ಈ ಇಬ್ಬರು ಸಚಿವರು ತಮಗೆ ನೀಡಿದ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಅಧಿಕೃತ ಮಾಹಿತಿ ಹೊರ ಬೀಳಬೇಕಿದೆ.




Leave a Reply

Your email address will not be published. Required fields are marked *

error: Content is protected !!