ಆಲಮಟ್ಟಿ ಜಲಾಶಯದಿಂದ ನೀರು ಹರಿಸಲು ಸೂಚನೆ

338

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಜಿಲ್ಲೆಯ ಆಲಮಟ್ಟಿ ಮತ್ತು ಯಾದಗಿರಿಯ ನಾರಾಯಣಪುರ ಜಲಾಶಯಗಳಿಂದ ನೀರು ಹರಿಸಲು, ಡಿಸಿಎಂ ಗೋವಿಂದ ಕಾರಜೋಳ ಆದೇಶಿಸಿದ್ದಾರೆ.

ಜುಲೈ 21ರಿಂದ ನೀರು ಹರಿಸಲು ಪ್ರಾರಂಭಿಸುವಂತೆ ಡಿಸಿಎಂ ಗೋವಿಂದ ಕಾರಜೋಳ ಆದೇಶಿಸಿದ್ದಾರೆ. 2020–21ನೇ ಸಾಲಿನ ಕಾಲುವೆ ಜಾಲದ ಕ್ಲೋಜರ್‌ ಕಾಮಗಾರಿ ಜುಲೈ 20ರೊಳಗಾಗಿ ಪೂರ್ಣಗೊಳಿಸಿ, ನೀರು ಒದಗಿಸುವಂತೆ ಹೇಳಿದ್ದಾರೆ.

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಕಡಿಮೆ ಆಗುವವರೆಗೂ ಕಾಲುವೆಗೆ ನೀರು ಹರಿಸಲು ಹಾಗೂ ಒಳಹರಿವು ಸ್ಥಗಿತವಾದ ನಂತರ ಹಿಂಗಾರಿಗೆ ನಾರಾಯಣಪುರ ಜಲಾಶಯದ ಕಾಲುವೆಯಿಂದ 14 ದಿನ ನೀರು ಹರಿಸಿ, 8 ದಿನ ಬಂದ್‌ ಹಾಗೂ ಆಲಮಟ್ಟಿ ಜಲಾಶಯದಿಂದ ಕಾಲುವೆಗಳಿಗೆ 8 ದಿನ ಹರಿಸಿ, 7 ದಿನ ಬಂದ್ ಪದ್ಧತಿ ಅನುಸರಿಸಿ ನೀರು ಹರಿಸಲಾಗುವುದು ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!